ವಿಜಯೇಂದ್ರ ಪಾದಯಾತ್ರೆಯ ಹಿಂದಿನ ಉದ್ದೇಶ ತೆರೆದಿಟ್ಟ ಬಸನಗೌಡ ಪಾಟೀಲ

Sampriya

ಮಂಗಳವಾರ, 30 ಜುಲೈ 2024 (18:39 IST)
Photo Courtesy X
ಅಥಣಿ: ಕಾಂಗ್ರೆಸ್ ಸರ್ಕಾರದ ಹಗರಣವನ್ನು ಮುಂದಿಟ್ಟು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವುದು ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲೋ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು ಪ್ರಶ್ನಿಸಿದರು.

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಮಾತನಾಡಿದ ಅವರು ಪಾದಯಾತ್ರೆಯನ್ನು ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರ ವಿರುದ್ಧ ಹೊರಟಿದ್ದಾರೋ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಹೊರಟಿದ್ದಾರೋ ಎಂಬುವುದನ್ನು ಕಾದು ನೋಡಬೇಕಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ವಾಲ್ಮೀಕಿ ನಿಗಮದ ಹಣವನ್ನು ಈ ಸರ್ಕಾರ ಕೊಳ್ಳೆ ಹೊಡೆದಿರುವು ಈ ಸರ್ಕಾರ ಮೈಸೂರಿನ 'ಮುಡಾ' ಹಗರಣದ‌ಲ್ಲಿ ದಲಿತ ಸಮುದಾಯದ ರೈತನ ಜಮೀನು ನುಂಗಿದ್ದಾರೆ. ನಾವು ಈ ಭ್ರಷ್ಟಾಚಾರ ಮುಂದಿಟ್ಟುಕೊಂಡು, ಯಾವುದೇ ಒಳ ಒಪ್ಪಂದವಿಲ್ಲದೇ ಹೋರಾಟ ಮಾಡುತ್ತಿದ್ದೇವೆ’ ಎಂದರು.




ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ