ಮಾಜಿ ಗ್ರಾಮ ಪಂಚಾಯತ ಸದಸ್ಯರ ಮನೆ ಮುಂದೆ ಕಾರು ನಿಲ್ಲಿಸಿ, ಗೆಳೆಯರೊಡನೆ ಎಣ್ಣೆ ಪಾರ್ಟಿ ಮಾಡುತ್ತಿದ್ದ ರಾಜ್ಯ ಅರಣ್ಯ ಹಾಗೂ ಪರಿಸರ ಖಾತೆ ಸಚಿವರ ರಮಾನಾಥ ರೈ ಅವರ ಪುತ್ರ ದೀಪು ರೈ, ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೆರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೇರೆದಿರುವುದನ್ನು ಪ್ರಶ್ನಿಸಿದ ಸ್ಥಳೀಯರಿಗೆ ನಾನು ಮಂತ್ರಿ ಮಗ ನಿಮ್ಮನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಧಮ್ಕಿ ಹಾಕಿದ್ದಲ್ಲದೆ, ಸ್ನೇಹಿತರೊಂದಿಗೆ ಸ್ಥಳೀಯರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಕ್ರೋಶಗೊಂಡ ಸ್ಥಳಿಯರು ಮಂತ್ರಿ ಪುತ್ರನನ್ನು ಬಾರಕೋಲಿನಿಂದ ಬಾರಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.