ಮುಂಡರಗಿ: ಬಸವರಾಜ ಬೊಮ್ಮಾಯಿಗೆ ಕಂಬಳಿ ಹೊದಿಸಿ, ಕುರಿ ಕೊಟ್ಟ ಗ್ರಾಮಸ್ಥರು

Sampriya

ಭಾನುವಾರ, 31 ಮಾರ್ಚ್ 2024 (20:08 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ  ಪ್ರಯುಕ್ತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹಾಗೂ ಬಿಡ್ನಾಳ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಈ ವೇಳೆ ಅವರಿಗೆ ಗ್ರಾಮದ ಜನರು ಕರಿಯ ಕಂಬಳಿ ಹೊದಿಸಿ, ಕುರು ಮರಿಯನ್ನು ಉಡುಗೊರೆಯಾಗಿ ನೀಡಿದರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ತನುಯೆಂಬುವ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವರಿ ಹಿಕ್ಕಿಯ ಹೆಡಗಿ
ಗುರು ಹೇಳಿದ ಬಾಳು ಹಾಲಿನ ಗಡಗಿ
ನಮ್ಮ ಕೈಲೇ ಇದ್ಯೋ ಅರಿವಿನ ಬಡಗಿ

ಇಂದು ಹಾವೇರಿ-ಗದಗ ಲೋಕಸಭಾ ಚುನಾವಣೆಯ ಪ್ರಯುಕ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹಾಗೂ ಬಿಡ್ನಾಳ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಆದರದಿಂದ ಸ್ವಾಗತಿಸಿ, ಕರಿಯ ಕಂಬಳಿ ಹೊದಿಸಿ, ಕುರಿ ಮರಿಯನ್ನು ಉಡುಗೊರೆಯಾಗಿ ನೀಡಿದರು.

ಗ್ರಾಮಸ್ಥರ ನಿಷ್ಕಲ್ಮಶ ಪ್ರೀತಿಗೆ ಹಾಗೂ ನೀಡಿದ ಬೆಂಬಲಕ್ಕೆ ನಾನು ಸದಾ ಚಿರಋಣಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ