ಶಾಸಕ ಕುಮಾರ್ ಬಂಗಾರಪ್ಪಗೆ ಗ್ರಾಮಸ್ಥರ ತರಾಟೆ

ಭಾನುವಾರ, 9 ಏಪ್ರಿಲ್ 2023 (15:00 IST)
ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸೊರಬ ಶಾಸಕ ಕುಮಾರ್ ಬಂಗಾರಪ್ಪರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.. ಶಿವಮೊಗ್ಗದ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಶಾಸಕರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ. ಕುಪ್ಪಗಡ್ಡೆ ಹೋಬಳಿಯಲ್ಲಿ ಇತ್ತೀಚೆಗೆ ಗ್ರಾಮಸ್ಥರ ತೋಟವನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಶಪಡಿಸಿದ್ರು... ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು. ತೋಟ ತೆರವು ವಿಚಾರದಲ್ಲಿ ಶಾಸಕರ ಪಾತ್ರವಿದೆ ಎಂದು ಆರೋಪಿಸಿ ಶಾಸಕರಿಗೆ ಕ್ಲಾಸ್​​ ತೆಗೆದುಕೊಳ್ಳಲಾಗಿದೆ.. ಶಾಸಕರನ್ನು ಮಾತನಾಡಲು ಕೂಡ ಬಿಡದೇ ಗ್ರಾಮಸ್ಥರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.. ಈ ವೇಳೆ, ಗ್ರಾಮಸ್ಥರು ಮತ್ತು ಶಾಸಕರ ನಡುವೆ ಜಟಾಪಟಿ ಏರ್ಪಟ್ಟಿತ್ತು.. ಈ ರೀತಿ ಮುಂದೆ ಆಗದಂತೆ ನೋಡಿಕೊಳ್ಳಿ ಎಂದು ಶಾಸಕರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ