ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ

ಗುರುವಾರ, 18 ಜೂನ್ 2020 (09:17 IST)
ಮಂಗಳೂರು : ಇಂದು ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ನಿಯಮ ಉಲ್ಲಂಘನೆಯಾಗಿದೆ.

ಮಂಗಳೂರು ಹೊರವಲಯದ ತಲಪಾಡಿಯಲ್ಲಿರುವ ಮರಿಯಾಶ್ರಮ ಸಂಸ್ಥೆಯ ಬಳಿ ಪರೀಕ್ಷೆ ಬರೆಯುವುದಕ್ಕೆ ಬಂದಿರುವ ವಿದ್ಯಾರ್ಥಿಗಳು  ಗುಂಪಾಗಿ ನಿಂತಿದ್ದಾರೆ. ಆದರೂ  ಸಿಬ್ಬಂದಿಗಳು ಏನು ಹೇಳದೆ  ನಿರ್ಲಕ್ಷ್ಯ ತೋರಿದ್ದಾರೆ.

ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಹೇಳಿದ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೋಷಕರು ಇಲಾಖೆಯ ಮೇಲೆ ಆಕ್ರೋಶ ವ್ತಕ್ತಪಡಿಸಿದ್ದಾರೆ.  

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ