ಸರ್ಕಾರದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ವಿಷ್ಣು ಅಳಿಯ ಅನಿರುದ್ಧ

ಶನಿವಾರ, 1 ಡಿಸೆಂಬರ್ 2018 (11:27 IST)
ಬೆಂಗಳೂರು : ವಿಷ್ಣು ಸ್ಮಾರಕ ಆಯ್ತು, ಈಗ ವಿಷ್ಣು ಫಿಲಂ ಸಿಟಿಗಾಗಿ ಮತ್ತೆ ವಿಷ್ಣು ಅಳಿಯ ಅನಿರುದ್ಧ ಸರ್ಕಾರದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ರಾಮನಗರದಲ್ಲಿ ಫಿಲ್ಮ್ ಇನ್ಸ್ ಟಿಟ್ಯೂಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿತ್ತು. ವಿಷ್ಣು ಹೆಸರಲ್ಲಿ ಫಿಲ್ಮ್ ಇನ್ಸ್ ಟಿಟ್ಯೂಟ್ ಮಾಡುವ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ನಾವು’ ಎಂದು ಹೇಳಿದ್ದಾರೆ.


ಅಲ್ಲದೇ ‘ತುಂಬಾ ವರ್ಷಗಳಿಂದ ಈ ಬಗ್ಗೆ ಗಮನ ಸೆಳೆದಿದ್ದೇವೆ. ಈ ಬಗ್ಗೆ ಸರ್ಕಾರಕ್ಕೆ ವಿಷ್ಣು ಕುಟುಂಬ ಬ್ಲೂ ಪ್ರಿಂಟ್ ಹಾಗೂ ಬಜೆಟ್ ಬಗ್ಗೆ ವರದಿ ನೀಡಿದ್ದರೂ ಕೂಡ ಸರ್ಕಾರದ ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಅನಿರುದ್ಧ್ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ