ಬಿಜೆಪಿ ವಿರುದ್ಧ ವಿಶ್ವನಾಥ್​ ಲೇವಡಿ

ಶನಿವಾರ, 8 ಜುಲೈ 2023 (15:32 IST)
ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ.. ಇಂದು ಬಿಜೆಪಿಯಲ್ಲಿ ಅರಾಜಕತೆ ಇದೆ ಅನ್ನೋದಕ್ಕೆ ಇದು ಸಾಕ್ಷಿ ಅಂತ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಯಾವ ರಾಜ್ಯಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನ ಸರ್ಕಾರ ನೀಡಿದೆ. ಆದರೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಏರಿಕೆಯಾದಾಗ ದೇಶಕ್ಕೋಸ್ಕರ ನೀಡ್ತೇವೆ ಎಂದಿದ್ರು. ಅದೇ ರೀತಿ ಉಳ್ಳವರು ನಮಗೆ ಈ ಯೋಜನೆ ಬೇಡ ಅಂತ ಹೇಳಿ ಎಂದರು.. 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದಾರೆ.. ಗೃಹಜ್ಯೋತಿ ಯೋಜನೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಜನಪರ ಕಾರ್ಯಕ್ರಮಗಳು. ಇದನ್ನು ಸಮರ್ಪಕವಾಗಿ ಜಾರಿ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ