ನಾವು ಏಳು ಜನ ಶಾಸಕರು ಕೈ ಸೇರೋದು ನಿಶ್ಚಿತ: ಚಲುವರಾಯ ಸ್ವಾಮಿ

ಶುಕ್ರವಾರ, 19 ಮೇ 2017 (20:07 IST)
ನಾವು ಏಳು ಜನ ಶಾಸಕರು ಕೈ ಸೇರೋದು ನಿಶ್ಚಿತ ಎಂದು ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾವು ಕಾಂಗ್ರೆಸ್ ಪಕ್ಷ ಸೇರುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿಲ್ಲ. ನಾವು ಏಳು ಜನ ಶಾಸಕರ ಕಾಲಭೈರವೇಶ್ವರನ ದೇವಾಲಯದಲ್ಲಿ ಪ್ರಮಾಣ ಮಾಡಲು ಸಿದ್ದರಿದ್ದೇವೆ. ಆದರೆ, ಅದಕ್ಕೆ ಕುಮಾರಸ್ವಾಮಿ ಒಪ್ಪಲಿಲ್ಲ ಎಂದರು.
 
ಈಗಾಗಲೇ ಚಾಮರಾಜಪೇಟೆಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಜಮೀರ್ ಅಹ್ಮದ್ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ