ನಾವು ಯಾವ ಅತೃಪ್ತ ಶಾಸಕರಿಗೂ ಸಚಿವ ಸ್ಥಾನದ ಭರವಸೆ ನೀಡಿಲ್ಲ- ಸಿದ್ದರಾಮಯ್ಯ

ಗುರುವಾರ, 17 ಜನವರಿ 2019 (13:08 IST)
ಹುಬ್ಬಳ್ಳಿ : ನಾವು ಯಾವ ಅತೃಪ್ತ ಶಾಸಕರಿಗೂ ಸಚಿವ ಸ್ಥಾನದ ಭರವಸೆ ನೀಡಿಲ್ಲ. ಸದ್ಯಕ್ಕೆ ಮಂತ್ರಿಮಂಡಲದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಆಗಿ ಹೇಳಿದ್ದಾರೆ.


ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,’ ಯಾವುದೇ ಕಾರಣಕ್ಕೂ ಅತೃಪ್ತ ಶಾಸಕರಿಗೆ ದೋಸ್ತಿ ಸರಕಾರದಲ್ಲಿ ಸಚಿವ ಸ್ಥಾನ ನೀಡೋದಿಲ್ಲ, ಯಾವುದೇ ಕಾರಣಕ್ಕೂ, ಸಚಿವ ಸ್ಥಾನವನ್ನು ಯಾರಿಂದಲ್ಲೂ ಕಿತ್ತುಕೊಳ್ಳುವುದಿಲ್ಲ. ನಾಳೆ ನಡೆಯುವ ಪಕ್ಷದ ಶಾಸಕಾಂಗ ಸಭೆಯಗೆ ಎಲ್ಲರೂ ಹಾಜರಾಗಬೇಕು’ ಎಂದು ಅತೃಪ್ತ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.


‘ಅಪರೇಷನ್ ಎಂಬ ಪದ ಪ್ರಾರಂಭಿಸಿದ್ದೇ ಯಡಿಯೂರಪ್ಪ. ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಬಿಜೆಪಿಯವರು ವಿರೋಧ ಪಕ್ಷದಲ್ಲಿ ಕುಳಿತುಕೊಂಡು ತಮ್ಮ ಕೆಲಸವನ್ನು ಸರಿಯಾಗಿ ಮಾಡಲಿ’ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ