ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷದ ಯುವ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಹಾಗೂ ನನ್ನ ನಡುವೆ ಭಿನ್ನಾಭಿಪ್ರಾಯ ಇದ್ದುದು ನಿಜ. ಅಣ್ಣ-ತಮ್ಮಂದಿರ ನಡುವೆ ಭಿನ್ನಾಭಿಪ್ರಾಯವಿರುವುದು ಸಹಜ. ಅದೇ ರೀತಿ ನಮ್ಮ ನಡುವೆಯೂ ಭಿನ್ನಾಭಿಪ್ರಾಯ ಇತ್ತು. ಆದರೆ ಪ್ರಸ್ತುತ ಅಂತಹ ಯಾವುದೇ ತೊಂದರೆಗಲಿಲ್ಲ ಎಂದರು.
ಇದೇ ವೇಳೆ, ತಮ್ಮ ಪಕ್ಷದ ವರಿಷ್ಠರನ್ನು ನೆನೆದ ಅವರು, ರಾಜಕೀಯದಲ್ಲಿ ನನ್ನನ್ನು ಬೆಳೆಸಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು. ನಾನು ಎಂದೆಂದಿಗೂ ಜೆಡಿಎಸ್ ಪಕ್ಷ ಬಿಟ್ಟು ಹೊರ ಹೋಗುವುದಿಲ್ಲ. ಪಕ್ಷ ಬಿಡುವ ಸ್ಥಿತಿ ಬಂದರೆ ಅಂದೇ ನನ್ನ ಜೀವನದಲ್ಲಿ ರಾಜಕೀಯ ನಿವೃತ್ತಿ ಘೋಷಿಸುವೆ ಎಂದರು.