ನಮ್ಮದೇ ಆದ ತಂತ್ರಗಾರಿಕೆಯಲ್ಲಿ ಸಫಲರಾಗ್ತಿವಿ: ಆರ್. ಅಶೋಕ್

ಭಾನುವಾರ, 30 ಆಗಸ್ಟ್ 2015 (13:11 IST)
ಬಿಬಿಎಂಪಿ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಮ್ಮದೇ ಆದ ತಂತ್ರಗಾರಿಕೆ ಮಾಡತ್ದಿದ್ದು ಸಫಲರಾಗ್ತಿವಿ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.
 
ಪಕ್ಷೇತರರು ನಮ್ಮ ಜೊತೆಯಲ್ಲಿದ್ದರು. ಅವರಿಗೆ ಯಾವ ಸ್ಥಾನ ಕೊಡಬೇಕು ಎಂದು ತೀರ್ಮಾನಿಸಿದ್ದೇವು. ಆದರೆ, ಅಷ್ಟರಲ್ಲಿಯೇ ಕಾಂಗ್ರೆಸ್ ಪಕ್ಷದವರು ಪಕ್ಷೇತರರನ್ನು ಹೈಜಾಕ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಬಿಬಿಎಂಪಿಯಲ್ಲಿ ಬಿಜೆಪಿಯಿಂದ ಮೇಯರ್ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಕಾಂಗ್ರೆಸ್ ಮತ್ತು ಜೆಡ್ಎಸ್ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದು, ಯಶಸ್ವಿಯಾಗುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
 
ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಅಲಂಕರಿಸಲು ಕೇವಲ ಮೂರು ಸದಸ್ಯರ ಅವಶ್ಯಕತೆಯಿದ್ದು, ಮೂವರು ಪಕ್ಷೇತರ ಶಾಸಕರು ಬೆಜೆಪಿಯನ್ನು ಬೆಂಬಲಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮುಖಂಡ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ