ವರ್ಕ್ ಔಟ್ ಮಾಡುವ ವೇಳೆ ತಮ್ಮ ಬಲ ಭುಜ ಹಾಗೂ ಎದೆಯಲ್ಲಿ ಸ್ವಲ್ಪ ಮಟ್ಟಿನ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಡಾ.ಶಿವರಾಜ್ ಕುಮಾರ್ ಅವರನ್ನು ಪರೀಕ್ಷಿಸಿರುವ ಮಲ್ಯಾ ಆಸ್ಪತ್ರೆಯ ವೈದ್ಯ ಡಾ.ವಿ.ಕೆ.ಶ್ರೀನಿವಾಸ್ ಅವರು ಪ್ರತಿಕ್ರಿಯಿಸಿದ್ದು, ಶಿವಣ್ಣ ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಣ್ಣ ಅವರು ಎದೆ ಹಾಗೂ ಭುಜ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಪಿ, ಇಸಿಜಿ, ರಕ್ತ ಹಾಗೂ ಆಂಜೋಗ್ರಾಂ ಪರೀಕ್ಷೆ ಸೇರಿದಂತೆ ಇನ್ನಿತರೆ ಪರೀಕ್ಷೆಗಳನ್ನು ಮಾಡಿದ್ದೇವೆ. ಆದರೆ ಅರಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಅವರನ್ನು ಸ್ಪೆಶಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಡಿಸ್ ಚಾರ್ಜ್ ಮಾಡಲಿದ್ದೇವೆ ಎಂದ ಅವರು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದರು.