ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮಲ್ಲಿಲ್ಲ: ಸಚಿವ ಸುನೀಲ್‌

ಭಾನುವಾರ, 15 ಮೇ 2022 (09:00 IST)
ದಾವಣಗೆರೆ: ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮ ಪಕ್ಷದಲ್ಲಿಲ್ಲ, ನಮ್ಮಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು ಹಣಕ್ಕಲ್ಲ ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದರು. 
 
ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಅದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ರಾಜ್ಯಕ್ಕೆ ಒಳಿತಾಗುವ ನಿರ್ಧಾರವನ್ನೇ ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ. ನಮ್ಮ ವರಿಷ್ಠರಿಗೆ ದೂರದೃಷ್ಟಿಇದ್ದು, ಯಾವ ಸಮಯಕ್ಕೆ ಯಾವ ನಿರ್ಣಯ ಕೈಗೊಳ್ಳಬೇಕೆಂಬುದು ನಾಯಕರಿಗೆ ಗೊತ್ತಿದೆ ಎಂದರು.
 
ಪಕ್ಷವು ನಮಗೆ ಎಲ್ಲವನ್ನೂ ಕೊಟ್ಟಿದ್ದು, ನಾವು ಪಕ್ಷಕ್ಕೆ ಏನನ್ನೂ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು, ಹಣಕ್ಕಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಾವು 2023ರ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ. ಕಾಂಗ್ರೆಸ್‌ ಪಕ್ಷದವರು ನಾಯಕರೇ ಇಲ್ಲದೆ ಅನಾಥರಂತೆ ಕೋಣೆಯಲ್ಲಿದ್ದಾರೆ ಎಂದರು.
 
ರಾಜ್ಯದ ಜನತೆಗೆ ಭರವಸೆ ಇದ್ದರೆ ಅದು ಬಿಜೆಪಿ ಮೇಲೆ ಹಾಗೂ ಪ್ರಧಾನಿ ಮೋದಿ ನಾಯಕತ್ವದ ಮೇಲೆ ಮಾತ್ರ ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ