ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ : ಶೋಭಾ ಕರಂದಾಜ್ಲೆ

ಗುರುವಾರ, 23 ಫೆಬ್ರವರಿ 2023 (13:05 IST)
ಬೆಳಗಾವಿ : ಫೆ.27ರಂದು ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದಾಜ್ಲೆ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಬೆಳಗಾವಿ ಗಂಡುಮೆಟ್ಟಿದ ನೆಲಕ್ಕೆ ಪ್ರಧಾನಮಂತ್ರಿ ಬರುತ್ತಿದ್ದಾರೆ. ಮೊದಲ ಬಾರಿಗೆ ಕರ್ನಾಟಕದಿಂದ ರೈತ ಕಿಸಾನ್ ಸಮ್ಮಾನ್ ಯೋಜನೆ ನಿಧಿ ರೈತ ಖಾತೆಗೆ ಹಾಕಲಿದ್ದಾರೆ.

ಕಳೆದ ಬಾರಿ ದೆಹಲಿ ಗ್ರಾಮೀಣ ಪ್ರದೇಶದಿಂದ ರೈತರ ಖಾತೆಗೆ 22 ಸಾವಿರ ಕೋಟಿ ಹಣವನ್ನು ಹಾಕಿದ್ದಾರೆ. ಇವತ್ತು ಕರ್ನಾಟಕದಿಂದ 14 ಕೋಟಿ ರೈತರ ಖಾತೆಗೆ 2 ಲಕ್ಷ 70 ಸಾವಿರ ಕೋಟಿ ಹಣ ಹಾಕಲಿದ್ದಾರೆ.

ಪ್ರತಿ ಮೂರು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 6 ಸಾವಿರ ರೂ. ಹಾಕುತ್ತಿದ್ದೇವೆ. ಈ ಬಾರಿ ಯಡಿಯೂರಪ್ಪನವರ ಜನ್ಮದಿನದಂದು ರೈತರ ಖಾತೆಗೆ ಹಣ ಹಾಕುತ್ತಿರುವುದು ಖುಷಿ ತಂದಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ