ಕಾಂಗ್ರೆಸ್ ಜತೆ ಹೋರಾಡಲು ಏಕತೆ ಬೇಕು: ಅನಂತ್‌ಕುಮಾರ್

ಶನಿವಾರ, 6 ಮೇ 2017 (12:31 IST)
ಕಾಂಗ್ರೆಸ್ ಜತೆ ಹೋರಾಡಲು ಏಕತೆ ಬೇಕು. ನಾವೆಲ್ಲರು ಒಂದಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಕರೆ ನೀಡಿದ್ದಾರೆ.
 
ನಗರದಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಷಣ ಮಾಡಿದ ಅವರು, ನಮ್ಮಲ್ಲಿರುವ ಭಿನ್ನಮತವನ್ನು ಮರೆತು ಒಂದಾಗಿ ಹೋರಾಟ ನಡೆಸಿದಾಗ ಮಾತ್ರ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.
 
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಕೌಂಟ್‌ಡೌನ್ ಶುರುವಾಗಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಾಗಿದೆ. ಅದಕ್ಕಾಗಿ ನಾವೆಲ್ಲರು ಒಂದಾಗುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
 
ದೇಶದ 17 ರಾಜ್ಯಗಳಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ತರಬೇಕಾಗಿದೆ. ಅದಕ್ಕಾಗಿ ಏಕತೆ, ಸಕ್ರಿಯತೆ ಅಗತ್ಯವಾಗಿದೆ. ಏಕತೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋರಾಟ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ