ಕಾಂಗ್ರೆಸ್ ಪ್ರಭಾವ ತಗ್ಗಿಸಲು ಬಸವೇಶ್ವರ ಪತ್ಥಳಿಗೆ ಅವಮಾನ ಮಾಡಿದ ದುರುಳರು!

ಶನಿವಾರ, 21 ಜನವರಿ 2017 (18:43 IST)
ವಿಜಯಪುರ ತಾಲೂಕಿನ ನಿಡೋಣಿ ಗ್ರಾಮದಲ್ಲಿ ಬಸವೇಶ್ವರ ಪುತ್ಥಳಿಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅರ್ಜುನ್ ಗುಣದಾಳ, ಮಹೇಶ್ ಗುಣದಾಳ ಹಾಗೂ ರಮೇಶ್ ಪಾಟೀಲ್ ಎಂಬ ಆರೋಪಿಗಳನ್ನು ಬಬಲೇಶ್ವರ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಸಕ್ರೀಯ ಬಿಜೆಪಿ ಕಾರ್ಯಕರ್ತರ ಮಕ್ಕಳು ಎಂದು ತಿಳಿದು ಬಂದಿದೆ. 
 
ಎಪಿಎಂಸಿ ಚುನಾವಣೆಯಲ್ಲಿ ನಿಡೋಣಿ ಗ್ರಾಮದ ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ಪ್ರಭಾವವನ್ನು ತಗ್ಗಿಸಲು ಈ ಕೃತ್ಯ ಎಸಗಲಾಗಿದೆ ಎಂದು ಬಂಧಿತರು ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. 
 
ಬಂಧಿತ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರ ಮಾಡಲು ಎಸ್‌ಪಿ ಸಿದ್ರಾಮಪ್ಪ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ