ಕಾಂಗ್ರೆಸ್‌ನವರಿಂದಲೇ ನಡಹಳ್ಳಿ ವಿರುದ್ಧ ಷಡ್ಯಂತ್ರ; ಕುಮಾರಸ್ವಾಮಿ ವಾಗ್ದಾಳಿ

ಗುರುವಾರ, 18 ಫೆಬ್ರವರಿ 2016 (19:31 IST)
ಕಾಂಗ್ರೆಸ್‌ ಪಕ್ಷದ ನಾಯಕರಿಂದಲೇ ಶಾಸಕ ನಡಹಳ್ಳಿ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ..
 
ರಾಜಕೀಯವಾಗಿ ಶಾಸಕ ಎ.ಎಸ್.ನಡಹಳ್ಳಿಯವರನ್ನು ತುಳಿಯಲು ಕುತಂತ್ರ ನಡೆಸಿದೆ. ಕಾಂಗ್ರೆಸ್ ಮುಖಂಡರ ಷಡ್ಯಂತ್ರದ ಬಗ್ಗೆ ನಡಹಳ್ಳಿ ನನ್ನ ಮುಂದೆ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಅವರ ಬೆಂಬಲಕ್ಕೆ ಜೆಡಿಎಸ್ ನಿಂತಿದೆ ಎಂದು ಘೋಷಿಸಿದರು.
 
ನಡಹಳ್ಳಿ ಸೂಚಿಸಿದ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಶಾಸಕ ನಡಹಳ್ಳಿಯವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಶಾಸಕ ನಡಹಳ್ಳಿಯವರ ವಿರುದ್ಧ ಕತ್ತಿಮಸೆಯುತ್ತಿದ್ದಾರೆ. ಅವರನ್ನು ಪಕ್ಷದಿಂದ ಹೊರಹಾಕಲು ಸಂಚು ರೂಪಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ