ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ : ಜಿ.ಪರಮೇಶ್ವರ್

ಶನಿವಾರ, 19 ಆಗಸ್ಟ್ 2023 (11:19 IST)
ಬೆಳಗಾವಿ : ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ, ಅವರನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು ಯಾರು ಬರುತ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ ಬರ್ತಾರೆ ಎನ್ನುವ ಮಾತಿದೆ. ಬರುವವರನ್ನ ನಾವು ಕರೆದುಕೊಳ್ಳುತ್ತೇವೆ ಎಂದರು.
135 ಶಾಸಕರಿದ್ದರೂ ಬೇರೆ ಶಾಸಕರ ಅವಶ್ಯಕತೆ ಇದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಅವಶ್ಯಕತೆ ಪ್ರಶ್ನೆ ಇಲ್ಲ. ಅವರು ನಮ್ಮ ಕಾಂಗ್ರೆಸ್ ಪಕ್ಷದ ನಾಯಕತ್ವ, ಸಿದ್ದಾಂತ ಒಪ್ಪುವುದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಾಗುತ್ತದೆ ಎಂದು ತಿಳಿಸಿದರು.

ಕಿರುಕುಳ ಕೊಡ್ತಿದ್ದಾರೆ ಎಂಬ ಶಿವರಾಮ್ ಹೆಬ್ಬಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮಲ್ಲಿಂದ ಹೋದ ಕೆಲವರಿಗೆ ಅಸಮಾಧಾನ ಆಗಿದೆ ಎಂಬುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ ಅದು ಸತ್ಯವಾಗಿದ್ದರೆ ಬಿಜೆಪಿ ಬಿಟ್ಟು ಬರಬಹುದು. ಪಕ್ಷ ಬಿಟ್ಟು ಹೋದವರು ನಿಮ್ಮನ್ನ ಸಂಪರ್ಕ ಮಾಡಿದ್ದಾರಾ ಎಂಬ ಪ್ರಶ್ನೆಗೆ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಅಧ್ಯಕ್ಷರನ್ನು ಸಂಪರ್ಕ ಮಾಡಿರಬಹುದು ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ