ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ತಾಕತ್ತು ತೋರಿಸ್ತೇನೆ: ಕುಮಾರಸ್ವಾಮಿ

ಸೋಮವಾರ, 6 ನವೆಂಬರ್ 2017 (13:13 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ತಾಕತ್ತು ತೋರಿಸ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನನ್ನ ಜೀವನದ ಎರಡನೇ ಹೋರಾಟ ಆರಂಭವಾಗುತ್ತದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಏರುವುದು ಖಚಿತ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಜ್ವಲ್ ರೇವಣ್ಣಗೆ ದೇವೇಗೌಡರು ಗ್ರೀನ್ ಸಿಗ್ನಲ್ ತೋರಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ನೀವು ದೇವೇಗೌಡರಿಗೆ ಕೇಳಬೇಕು ಎಂದು ಅಡ್ಡಗೋಡೆಯ ಮೇಲೆ ದ್ವೀಪ ಇಟ್ಟಂತೆ ತಿರುಗೇಟು ನೀಡಿದ್ದಾರೆ.
 
ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಎಲ್ಲರಿಗೂ ಇರುತ್ತದೆ. ಅದರಂತೆ, ಪ್ರಜ್ವಲ್‌ ಕೂಡಾ ಸ್ಪರ್ಧಿಸುವ ಆಸೆಯಿದೆ. ಮುಂದಿಲ ಕೆಲ ದಿನಗಳಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ