ಕಾಂಗ್ರೆಸ್ ಜತೆ ಮೈತ್ರಿಯೆಂದರೆ ಬಿಜೆಪಿಗೆ ದಾರಿ ಮಾಡಿಕೊಟ್ಟಂತೆ: ಕುಮಾರಸ್ವಾಮಿ

ಸೋಮವಾರ, 17 ಏಪ್ರಿಲ್ 2017 (17:21 IST)
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

 
ಒಂದು ವೇಳೆ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡರೆ ಬಿಜೆಪಿ ದಾರಿ ಸುಗಮವಾಗುತ್ತದೆ. ಇದರಿಂದ ಆ ಪಕ್ಷಕ್ಕೆ ನಾವೇ ಬೆಳ್ಳಿ ತಟ್ಟೆಯಲ್ಲಿಟ್ಟು ಅಧಿಕಾರ ಕೊಟ್ಟಂತೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಮುಂಬರುವ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಗೆಲುವಿನ ಕುದುರೆಯನ್ನು ಕರ್ನಾಟಕದ ಗಡಿಯಾಚೆಯೇ ಕಟ್ಟಿಹಾಕುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ