ರಾಜ್ಯದಲ್ಲಿ ವಾರಾಂತ್ಯದ ಕರ್ಪ್ಯೂ ತೆರವು

ಗುರುವಾರ, 9 ಸೆಪ್ಟಂಬರ್ 2021 (21:57 IST)
ವ್ಯಾಪಾರಿಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ ಕೆಲವು ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಪ್ಯೂ ತೆರವುಗೊಳಿಸಿ ಆದೇಶ ಹೊರಡಿಸಿದೆ. 
 
ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
 
ದಕ್ಷಿಣ ಕನ್ನಡ, ಉಡುಪಿ ಹಾಗೂ ಹಾಸನ ಜಿಲ್ಲೆಯ ಜಾರಿಯಲ್ಲಿದ್ದ ವಾರಾಂತ್ಯದ ಕರ್ಪ್ಯೂ ತೆರವು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ