ವೀಕೆಂಡ್ ಕರ್ಫ್ಯೂ : ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ ಸಿಎಂಗೆ ಮನವಿ

ಸೋಮವಾರ, 17 ಜನವರಿ 2022 (13:42 IST)
ಬೆಂಗಳೂರು : ವೀಕೆಂಡ್ ಕರ್ಫ್ಯೂ ಹಿಂತೆಗೆಯಿರಿ, ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ ಎಂದು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.

ವೀಕೆಂಡ್ ಕರ್ಫ್ಯೂ ಸ್ಥಗಿತಗೊಳಿಸಿ, ನೈಟ್ ಕರ್ಫ್ಯೂ ಮುಂದುವರೆಸಿ. ವೀಕೆಂಡ್ ಕರ್ಫ್ಯೂ ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ  ಅನುಮತಿ ಕೊಡುವಂತೆ ಪತ್ರದ ಮೂಲಕ ಮದ್ಯ ಮಾರಾಟಗಾರರ ಸಂಘ ಇಂದು ಮನವಿ ಮಾಡಿಕೊಂಡಿದೆ. 

ಇಂದು ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟಗಾರರ ಸಂಘ ಅನುಮತಿಸಲು ಮನವಿ ಮಾಡಿಕೊಂಡಿದ್ದು, ಸಿಎಂ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬ ಕುತೂಹಲವಿದೆ. 

ಇಂದು ಸಂಜೆ ಕೋವಿಡ್ ಸಂಬಂಧಪಟ್ಟಂತೆ ಬೊಮ್ಮಾಯಿ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯಲಿದ್ದು, ಸಿಎಂ, ಮಂತ್ರಿಗಳಿಂದ ಮತ್ತು ತಜ್ಞರಿಂದ ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ