ಹಿಜಾಬ್ ವಿವಾದದಲ್ಲಿ ಸರ್ಕಾರದ ಹೆಜ್ಜೆ ಸ್ವಾಗತಃರ್ಹ

ಬುಧವಾರ, 9 ಫೆಬ್ರವರಿ 2022 (15:45 IST)
ಹಿಜಾಬ್ ವಿವಾದದ ಹಿನ್ನೆಲೆ ರಾಜ್ಯದ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿರುವುದನ್ನು ಬಿಜೆಪಿ ರಾಜ್ಯಾಧ್ಯ ಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರೌಢಶಾಲೆ & ಕಾಲೇಜುಗಳಿಗೆ ಮುಖ್ಯಮಂ ತ್ರಿ ಬಸವರಾಜ ಬೊಮ್ಮಾಯಿ ಅವರು 3 ದಿನ ರಜೆ ಘೋಷಿಸಿರುವುದು ಸ್ವಾಗತಾರ್ಹ.
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾ ಡುವ ನಿಟ್ಟಿನಲ್ಲಿ ಇದು ಉತ್ತಮ ಹೆಜ್ಜೆಯಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಯಾವುದೇ ಸಂಘರ್ಷಕ್ಕೆ ಆಸ್ಪದ ಕೊಡದೆ, ಶಾಂತಿ, ಸಾಮರಸ್ಯ ಸೌಹಾರ್ದತೆ ಉಳಿಸುವಲ್ಲಿ ಸಹಕರಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ