ಬಿಜೆಪಿಯವರು ಮಾಡಿದ್ದು ನಿಜವಾದ ದೇಶ ದ್ರೋಹ-ಸಚಿವ ಪ್ರಿಯಾಂಕ ಖರ್ಗೆ

geetha

ಸೋಮವಾರ, 4 ಮಾರ್ಚ್ 2024 (14:40 IST)
ಬೆಂಗಳೂರು-ಬಿಜೆಪಿಯವರು ಖಾಸಗಿ ಸಂಸ್ಥೆಗಳನ್ನು ಇಟ್ಟುಕೊಂಡು ಖಾಸಗಿಯಾಗಿ ಫೋರೆನ್ಸಿಕ್ ವರದಿಗಳನ್ನು ತರಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುವುದೇ ಮೊದಲನೇ ದೇಶದ್ರೋಹದ ಕೆಲಸ .ಇದು ಸಾಮಾನ್ಯ ಪ್ರಕರಣ ಅಲ್ಲ.ದೇಶದ್ರೋಹದ ಘೋಷಣೆ ಕೂಗಿದ್ದಾರೆ ಅಂತ ಹೇಳ್ತಾ ಇದ್ದಾರೆ ಅದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಪ್ರೀಯಾಂಕ ಖರ್ಗೆ ಹೇಳಿದ್ದಾರೆ.
 
ಇನ್ನೂ ಬಿಜೆಪಿಯವರು ಖಾಸಗಿ ಸಂಸ್ಥೆಗಳ ಹತ್ತಿರ ಹೋಗಿ ಅದನ್ನು ಪಬ್ಲಿಕ್ ಮಾಡ್ತಾ ಇದ್ದಾರಲ್ಲ .ಅದು ಮೊದಲನೇ ದೇಶದ್ರೋಹದ ಕೆಲಸ ಕ್ಲೂ ಫಾರ್ ಎವಿಡೆನ್ಸ್ ಫೋರೆನ್ಸಿಕ್  ಲ್ಯಾಬ್ ಅನ್ನೋ ಸಂಸ್ಥೆಯ ಕ್ರೆಡಿಬಿಲಿಟಿ ಏನು?ಇವರು ಖಾಸಗಿಯಾಗಿ ಏನಾದರೂ ಮಾಡಿಕೊಳ್ಳಲಿ.ಆ ಸಂಸ್ಥೆಗೆ ಸರ್ಕಾರದ ಸರ್ಟಿಫಿಕೇಶನ್ ಇದಿಯೋ ತರಬೇತಿ ಇದೆಯೋ ನನಗೆ ಗೊತ್ತಿಲ್ಲ .ಇದ್ದರೂ ಕೂಡ ಆ ಲ್ಯಾಬ್ ಈ ವಿಚಾರದಲ್ಲಿ ಸ್ಥಳೀಯ ಪೊಲೀಸರಿಗೆ ಮತ್ತು ಸರ್ಕಾರದ ಗಮನಕ್ಕೆ ತಂದು ವರದಿ ಕೊಡಬೇಕಿತ್ತು.

ಅಷ್ಟು ಮೆಚುರಿಟಿ ಸಂಸ್ಥೆಗೆ ಇರಬೇಕಾಗಿತ್ತು.ಬಿಜೆಪಿಯವರು ಫೋರೆನ್ಸಿಕ್ ಲ್ಯಾಬ್ ಗೆ ಕೊಟ್ಟಿರುವ ಫೂಟೇಜ್ ಯಾವುದು?ಇಂಟರ್ನೆಟ್ ನಲ್ಲಿ ವಿಡಿಯೋ ಕ್ವಾಲಿಟಿ ಸಪ್ರೆಸ್ ಆಗೆ ಆಗುತ್ತದೆ.ಯಾವ ಫೂಟೇಜ್ ಕೊಟ್ಟಿದ್ದಾರೆ ಮೊದಲನೇ ಪ್ರಶ್ನೆ  ರಾ ಫೂಟೇಜ್ ಕೊಟ್ಟಿದ್ರೆ ಇವರಿಗೆ ರಾ ಫೂಟೇಜ್ ಎಲ್ಲಿಂದ ಸಿಕ್ತು? ಎಂದು ಪ್ರೀಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.
 
ಇನ್ನೂ ನಾನೂ ಖಾಸಗಿ ಸಂಸ್ಥೆಗಳಿಗೆ ಕೊಟ್ಟು ನಾನೂ ರಿಪೋರ್ಟ್ ತೆಗೆದುಕೊಂಡಿದ್ದೇನೆ.ನಾನೂ ಅದನ್ನು ಸಾರ್ವಜನಿಕವಾಗಿ ಪಬ್ಲಿಷ್ ಮಾಡಬಹುದಲ್ಲ?ನಾನೂ ಹಾಗೆ ಮಾಡಿಲ್ಲ, ನಾನೂ ಯಾವುದೋ ರಿಪೋರ್ಟ್ ತಂದು ಹೇಳಬಹುದಲ್ಲ?ಬಿಜೆಪಿಯವರು ಮಾಡಿದ್ದು ನಿಜವಾದ ದೇಶ ದ್ರೋಹ.ಸಮಾಜದಲ್ಲಿ ಆತಂಕ ಇರಬೇಕು ಅಂತ ಇವರು ಯಾಕೆ ಬಯಸ್ತಾ ಇದ್ದಾರೆ?ಸಂವಾದ ಫೌಂಡೇಷನ್ ರಿಪೋರ್ಟ್ ತೆಗೆದುಕೊಳ್ಳೋದಕ್ಕೆ ಯಾರು ಇವರು?ಅವರಿಗೇನು ಆಸಕ್ತಿ?ಸರ್ಕಾರ ಪದೇ ಪದೇ ಎಫ್ಎಸ್ಎಲ್ ರಿಪೋರ್ಟ್ ನೋಡುವುದಕ್ಕೆ ಕಾರಣ ಯಾವುದೇ ಗೊಂದಲ ಇರಬಾರದು ಅಂತ ಇವರು ಯಾವ ಫೂಟೇಜ್ ಕೊಟ್ಟಿದ್ದಾರೋ?ಮೂರು ತೆಗೆದುಕೊಂಡಿದ್ದಾರೋ ನೂರು ತೆಗೆದುಕೊಂಡಿದ್ದಾರೋ ಗೊತ್ತಿಲ್ಲ.

ಗೃಹ ಇಲಾಖೆ ಇದರ ಬಗ್ಗೆ ವರದಿ ಕೊಡಬೇಕೇ ಹೊರತು ಸಂವಾದ ಫೌಂಡೇಶನ್ ಅಲ್ಲ.ಬಿಜೆಪಿಯವರಿಗೆ ಜವಾಬ್ದಾರಿಯುತ ಪಕ್ಷವಾಗಿ ಸಂವಾದ ಹಾಕಿದ ತಾಳಕ್ಕೆ ಕುಣಿತಾರಲ್ಲ ಇವರಿಗೆ ನಾಚಿಕೆ ಬೇಡ್ವಾ?ಎಂದು ಬಿಜೆಪಿ ವಿರುದ್ಧ ಪ್ರೀಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ