5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು?

ಶುಕ್ರವಾರ, 9 ಏಪ್ರಿಲ್ 2021 (12:54 IST)
ಬೆಂಗಳೂರು : 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ವಿಚಾರ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ನಿಶ್ಚಿತ. ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಬರಲಿದೆ. ತಮಿಳುನಾಡು , ಪುದುಚೆರಿಯಲ್ಲಿ ಎನ್ ಡಿಎ ಸರ್ಕಾರ ಬರುತ್ತೆ. ಕೇರಳದಲ್ಲಿಯೂ ನಾವು ಉತ್ತಮ ಪ್ರದರ್ಶನ ನೀಡಲಿದ್ದೇವೆ.  ಬೆಳಗಾವಿ ಲೋಕಸಭೆ 2 ವಿಧಾನಸಭೆಯಲ್ಲೂ ಗೆಲ್ತೇವೆ. ಉಪಚುನಾವಣೆಯಲ್ಲಿ ಬಿಜೆಪಿ ಗೆಲುತ್ತೆ ಎಂದು ಅವರು ಹೇಳಿದ್ದಾರೆ.

ಹಾಗೇ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಯಲ್ಲಿ ‍ಧಮ್ ಇಲ್ಲ. ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಎಷ್ಟು ಕ್ರಮಕೈಗೊಳ್ಳೋದು. ಎಂದು ಅವರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ