ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಬಿಎಸ್ ವೈ ಹೇಳಿದ್ದೇನು?

ಮಂಗಳವಾರ, 26 ಮಾರ್ಚ್ 2019 (12:05 IST)
ಬೆಂಗಳೂರು : ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಬಾರೀ ವಿರೋಧ ವ್ಯಕ್ತವಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು,’ನಾವು ಬೆಂಗಳೂರು ದಕ್ಷಿಣ ಕ್ಷೇತ್ರದ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಬೇಕು ಅಂತ ನಾವು ಹೈಕಮಾಂಡ್‌ಗೆ ಮನವಿ ಮಾಡಿಕೊಂಡಿದ್ದೇವು, ಆದರೆ ನಿನ್ನೆ ರಾತ್ರಿ ಪಟ್ಟಿ ನೋಡಿ ನಮಗೆ ಆಶ್ವರ್ಯವಾಗಿದೆ’ ಎಂದು ಹೇಳಿದ್ದಾರೆ.


ಇನ್ನು ‘ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದ ಅನಂತಕುಮಾರ್ ಅಭಿಮಾನಿಗಳು 'ತೇಜಸ್ವಿ ಸೂರ್ಯ ಗೋ ಬ್ಯಾಕ್, ನ್ಯಾಯ ಬೇಕು, ನ್ಯಾಯ ಬೇಕು' ಎಂದು ಘೋಷಣೆ ಕೂಗಿದ್ದಾರೆ. ಇದರಿಂದಾಗಿ ಕೆಲ ಕಾಲ ಸೌತ್ ಎಂಡ್ ಸರ್ಕಲ್ ನ ತೇಜಸ್ವಿನಿ ಅನಂತಕುಮಾರ್ ನಿವಾಸದ ಎದುರು ಬಿಗುವಿನ ವಾತಾವರಣ ಏರ್ಪಟ್ಟಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ