ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ಯಾರಿಗೆ?

ಶನಿವಾರ, 8 ಡಿಸೆಂಬರ್ 2018 (13:15 IST)
ಬೆಂಗಳೂರು : ಸಿಎಜಿ ವರದಿ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ‘ಸಿದ್ಧರಾಮಯ್ಯ ಬಜೆಟ್ ಗಾತ್ರ ಹೆಚ್ಚಾದಾಗ ವ್ಯತ್ಯಾಸ ಆಗುತ್ತೆ ಎಂದಿದ್ದಾರೆ. ಇದು ಜನರ ತೆರಿಗೆ, ಒಂದೊಂದು ಪೈಸೆಗೂ ಕೂಡ ಲೆಕ್ಕ ಇರಬೇಕು’ ಎಂದು ಹೇಳಿದ್ದಾರೆ.

 

‘ಸಿದ್ಧರಾಮಯ್ಯ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಆದರೂ ಸಿದ್ದರಾಮಯ್ಯ ನವರೇ ಹೀಗೆ ಲಘುವಾಗಿ ಮಾತಾಡುತ್ತಾರೆ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಈ ಬಗ್ಗೆ ಸದನ ಸಮಿತಿಯನ್ನು ರಚನೆ ಮಾಡಬೇಕು ‘ ಎಂದು ಅವರು ಆಗ್ರಹಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ