ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಶುಕ್ರವಾರ, 28 ಡಿಸೆಂಬರ್ 2018 (13:45 IST)
ಬೆಂಗಳೂರು : ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆ ಹಂಚಿಕೆಯಲ್ಲಿ ಅಸಮಧಾನ ಇಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


‘ನೂತನ ಖಾತೆ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುತ್ತೇನೆ. ನನ್ನನ್ನು ನೋಡಿದ್ರೆ ಅಸಮಾಧಾನಗೊಂಡಿರೋ ಹಾಗೆ ಕಾಣ್ತಿದ್ಯಾ? ನಿಗಮ ಮಂಡಳಿ ವಿಚಾರದಲ್ಲೂ ಅಸಮಾಧಾನ ಆಗಿಲ್ಲ. ಕೆಲವರು ಚರ್ಚೆ ಮಾಡ್ತಾರೆ, ವೈಯಕ್ತಿಕ ಅಭಿಪ್ರಾಯ ಹೇಳ್ತಾರೆ. ಅದಕ್ಕೆ ನಾನು ಜವಾಬ್ದಾರಿ ತೆಗೆದುಕೊಳ್ಳೋಕೆ ಆಗುತ್ತಾ? ಎಂದು ಹೇಳಿದ್ದಾರೆ.


ರಮೆಶ್ ಜಾರಕಿಹೊಳಿ, ಬಿಎಸ್ ವೈ ದೆಹಲಿಗೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಚರ್ಚೆ ಮಾಡೋದು ತಪ್ಪಾ? ಎಂದು ಅವರು ಪ್ರಶ್ನಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ