ರಾಯಚೂರಿನಲ್ಲಿ ಏರ್ ಪೋರ್ಟ್ ಸ್ಥಾಪನೆ ಬೇಡಿಕೆ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದೇನು?

ಗುರುವಾರ, 17 ಸೆಪ್ಟಂಬರ್ 2020 (11:59 IST)
ರಾಯಚೂರು : ರಾಯಚೂರಿನಲ್ಲಿ ಏರ್ ಪೋರ್ಟ್ ಸ್ಥಾಪನೆ ಬೇಡಿಕೆ ವಿಚಾರ ಈ ಬಗ್ಗೆ ವಿವರವಾದ ಯೋಜನೆ ಸಿದ್ಧಪಡಿಸಲು ಡಿಸಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಸಿದ್ಧಗೊಂಡ ಬಳಿಕ ಸಂಪುಟದ ಒಪ್ಪಿಗೆ ಪಡೆದು ಕ್ರಮ ಕೈಗೊಳ್ಳುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಯಿಂದ ಶಿಕ್ಷಣಕ್ಕೆ ಒತ್ತು ಸಿಗುತ್ತೆ. ಈಗಾಗಲೇ ಕೇಂದ್ರ ಸರ್ಕಾರ IIIT ನೀಡಿದೆ. ಏಮ್ಸ್ ಸಂಸ್ಥೆ ರಾಯಚೂರು ಜಿಲ್ಲೆಯಲ್ಲೇ ಸ್ಥಾಪಿಸಲು ಯತ್ನ ನಡೆಸಲಾಗಿದೆ. ರಾಯಚೂರು ನಗರದ ಅಭಿವೃದ್ಧಿಗೆ 100 ಕೋಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ