ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ದೇವೇಗೌಡರು ಹೇಳಿದ್ದೇನು?

ಮಂಗಳವಾರ, 11 ಡಿಸೆಂಬರ್ 2018 (13:43 IST)
ಬೆಂಗಳೂರು : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇದೀಗ ಬಿಜೆಪಿಗೆ ಟಾಂಗ್ ನೀಡಿದ್ದಾರೆ.


ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.


ಇನ್ನು ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರ ರೂಢ ಬಿಜೆಪಿ ಮನಸ್ಸು ಮಾಡಲಿ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ