ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದ ಬಗ್ಗೆ ಸಚಿವ ಬಿಸಿ ಪಾಟೀಲ್ ಹೇಳಿದ್ದೇನು?

ಮಂಗಳವಾರ, 8 ಸೆಪ್ಟಂಬರ್ 2020 (15:41 IST)
ಮೈಸೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಸಿನಿಮಾರಂಗ ಮಾತ್ರವಲ್ಲ ಇಡೀ ಸಮಾಜಕ್ಕೆ ಆತಂಕ ಎಂದು ಕೃಷಿ ಖಾತೆ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಡುವವರು ಎಲ್ಲಿದ್ರೂ ಕೆಡ್ತಾರೆ. ಸಿನಿಮಾರಂಗವೇ ಆಗಬೇಕಿಲ್ಲ. ನಾನೂ ಕೂಡ ಇಪ್ಪತ್ತು ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದೆ. ನಮ್ಮ ಕಾಲದಲ್ಲಿ ಡ್ರಗ್ಸ್ ದಂಧೆ ಬಗ್ಗೆ ಕೇಳಿರಲಿಲ್ಲ ಎಂದು ಹೇಳಿದ್ದಾರೆ.

ಹಾಗೇ ರೈತರ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಕೃಷಿ ವಿಜ್ಞಾನಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಿಲ್ಲ. ಫಿಲ್ಡ್ ಗೆ ಹೋಗಿ ರೈತರ ಜೊತೆ ಕೆಲಸ ಮಾಡಬೇಕು  ಎಂದು  ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ