ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಪ್ರಕರಣದ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದೇನು?

ಬುಧವಾರ, 5 ಮೇ 2021 (11:39 IST)
ಶಿವಮೊಗ್ಗ : ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಪ್ರಕರಣಕ್ಕೆ ಸಂಬಂಧಿಸಿಧಂತೆ ಬೆಡ್ ಬ್ಲಾಕ್ ಯಾವುದೋ ಮುಸ್ಲಿಂ ಸಂಘಟನೆಯೇ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಡ್ ಬ್ಲಾಕ್ ಮಾಡಿರೋರಲ್ಲಿ ಮುಸ್ಲಿಮರೇ ಹೆಚ್ಚಾಗಿ ಇದ್ದಾರೆ. ಕರ್ನಾಟಕದಲ್ಲಿ ಹಾಗೋ ಹೀಗೋ ಮ್ಯಾನೇಜ್ ಮಾಡ್ತಿದ್ದೀವಿ. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕೆಲವರಿಂದ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಸಂಸದರು, ಶಾಸಕರು ಈ ದಂಧೆ ಬಯಲು ಮಾಡಿದ್ದಾರೆ. ಇದರ ಹಿಂದೆ ಯಾರಿದ್ದಾರೆಂದು ತನಿಖೆ ನಂತರ ಗೊತ್ತಾಗುತ್ತೆ. ಸಂಘಟನೆಯೋ? ವ್ಯಕ್ತಿಯೋ ಎಂಬುದು ಸ್ಪಷ್ಟ ಆಗಬೇಕಾಗುತ್ತೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ