ಪಿಎ ರಮೇಶ್ ಆತ್ಮಹತ್ಯೆಯ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

ಶನಿವಾರ, 12 ಅಕ್ಟೋಬರ್ 2019 (14:44 IST)
ಬೆಂಗಳೂರು : ಐಟಿ ದಾಳಿಗೆ ಬೇಸತ್ತು ತಮ್ಮ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮಾಜಿ ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ತುಂಬಾ ಒಳ್ಳೆಯ ಹುಡುಗ. ನಾನು ಕಾಂಗ್ರೆಸ್ ಸಮಿತಿಯಲ್ಲಿ ಅಧ್ಯಕ್ಷನಾಗಿದ್ದಾಗಿನಿಂದ  ನನ್ನ ಜೊತೆ ಕೆಲಸಮಾಡಿಕೊಂಡು ಇದ್ದಾನೆ. ದುರದೃಷ್ಟಕರ ಯಾಕೆ ಹೀಗೆ ಮಾಡಿಕೊಂಡಿದ್ದಾನೋ ಗೊತ್ತಿಲ್ಲ. ಇಂದು ಬೆಳಿಗ್ಗೆ ಅವನಿಗೆ ಧೈರ್ಯ ಹೇಳಿ ಸಮಾಧಾನ ಮಾಡಿ ಕಳುಹಿಸಿದೆ. ಆದರೆ ಈಗ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಬೇಸರಗೊಂಡಿದ್ದಾರೆ.

 

ಕಳೆದ ಎರಡು ದಿನಗಳ ಹಿಂದೆ ಐಟಿ ಅಧಿಕಾರಿಗಳು ರಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಐಟಿ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಪರಿಶೀಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ