ಜೈಲಿನಲ್ಲಿರುವ ಶಶಿಕಲಾಗೆ ರಾಜಾತಿಥ್ಯ ನೀಡಲು ಹೇಳಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ-ಡಿಜಿಪಿ ಸತ್ಯನಾರಾಯಣರಾವ್ ಆರೋಪ

ಬುಧವಾರ, 7 ಮಾರ್ಚ್ 2018 (12:17 IST)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್‍ಗೆ ರಾಜಾತಿಥ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸೂಚಿಸಿರುವುದಾಗಿ ನಿವೃತ್ತ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ಆರೋಪ ಮಾಡಿದ್ದಾರೆ.


ಜೈಲಲ್ಲಿ ಹಾಸಿಗೆ, ದಿಂಬು ಕೊಡುವಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಖುದ್ದು ಕರೆದು ಸೂಚಿಸಿದ್ದರು. ಆದ್ರೆ ಇಂತಹ ಐಷಾರಾಮಿ ಸೌಲಭ್ಯ ನೀಡಲು ನನಗೆ ಅಧಿಕಾರವಿಲ್ಲವೆಂದರೂ ಸಿದ್ದರಾಮಯ್ಯ ಅವರು ಬಿಡಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಆದೇಶದಂತೆ ನಾನು ಐಷಾರಾಮಿ ಸೌಲಭ್ಯ ನೀಡಿದ್ದೇನೆ. ಇದರಲ್ಲಿ ನನ್ನ ತಪ್ಪೇನಿಲ್ಲ ಅಂತ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಸಮಿತಿ ಎದುರು ಸತ್ಯನಾರಾಯಣ ರಾವ್ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ