ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್ ಹೆಬ್ಬಾರ್ ಹೇಳಿದ್ದೇನು?

ಶುಕ್ರವಾರ, 18 ಆಗಸ್ಟ್ 2023 (12:24 IST)
ಕಾರವಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಪರೇಷನ್ ಹಸ್ತ ಶುರುವಾಗಿದೆ. ಗೆಲುವೊಂದೇ ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್ ನಂಬರ್ ಗೇಮ್ನತ್ತ ಟಾರ್ಗೆಟ್ ಹಾಕಿಕೊಂಡಿದೆ.
 
ಅದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ನಿಂದ ಎಷ್ಟೇ ಜನ ಬಂದರೂ ಬಾಗಿಲು ಓಪನ್ಗೆ ಸೀಕ್ರೆಟ್ ಆಪರೇಷನ್ಗೆ ಮುಂದಾಗಿದೆ. ಜೊತೆಗೆ ಮೂಲ ಕಾಂಗ್ರೆಸ್ಸಿಗರನ್ನ ಪಕ್ಷಕ್ಕೆ ಕರೆತರುವ ಪ್ರಯತ್ನವೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಕಮಲ ಬಿಟ್ಟು ಕೈ ಹಿಡಿಯಲು ಹೆಬ್ಬಾರ್, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ಶಿವರಾಮ್ ಹೆಬ್ಬಾರ್ ಬೆಂಬಲಿಗರೂ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಬೆಂಗಳೂರಿಗೆ ಹೋದ್ಮೇಲೆ ಮಾತಾಡ್ತೀನಿ ಅಂತಾ ಹೇಳಿದ್ದಾರೆ. ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ನಡೆ ಕೂಡ ಸಸ್ಪೆನ್ಸ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ