ಜೆಡಿಎಸ್ ಮೈತ್ರಿ ಧರ್ಮ ಪಾಲಿಸಲಿಲ್ಲ ಎಂಬ ಜಿಟಿಡಿ ಹೇಳಿಕೆಗೆ ಸಿದ್ಧರಾಮಯ್ಯ ಹೇಳಿದ್ದೇನು?

ಗುರುವಾರ, 2 ಮೇ 2019 (12:23 IST)
ಬೆಂಗಳೂರು : ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮೈತ್ರಿ ಧರ್ಮ ಪಾಲಿಸಲಿಲ್ಲ ಎಂಬ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆಗೆ ಇದೀಗ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.




ಸಚಿವ ಜಿ.ಟಿ. ದೇವೇಗೌಡರು  ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡುವಾಗ, ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ, ಆದರೆ ಜೆಡಿಎಸ್ ಕಾರ್ಯಕರ್ತರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.


ಸಚಿವರ ಹೇಳಿಕೆ ಈ ತನಕ ಯಾವುದೇ ಪ್ರತಿಕ್ರಿಯೆ ನೀಡಿರದ ಸಿದ್ಧರಾಮಯ್ಯ ಇದೀಗ ಈ ಕುರಿತು ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ.


ಮೇ 23ರ ಫಲಿತಾಂಶ‌ದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ