ಅಮ್ಮ ಬೇಕು ಅಂತ ಹಠ ಹಿಡಿದ ಮಗುವಿಗೆ ಶಿಕ್ಷಕ ಹಾಗೂ ಆಯಾ ಮಾಡಿದ್ದು ಕೇಳಿದ್ರೆ ಶಾಕ್ ಆಗ್ತೀರಿ!

ಬುಧವಾರ, 29 ಆಗಸ್ಟ್ 2018 (11:58 IST)
ಹುಬ್ಬಳ್ಳಿ : ಅಮ್ಮ ಬೇಕು ಅಂತ ಹಠ ಹಿಡಿದ 4 ವರ್ಷದ ಮಗುವಿನ ಜೊತೆ ಶಿಕ್ಷಕ ಹಾಗೂ ಆಯಾ ಅಮಾನವೀಯವಾಗಿ ನಡೆದುಕೊಂಡ ಘಟನೆ ಹುಬ್ಬಳ್ಳಿಯ ಹೆಗ್ಗೇರಿ ಪ್ರದೇಶದ ಬಾಲಾಜಿ ನರ್ಸರಿ ಶಾಲೆಯಲ್ಲಿ ನಡೆದಿದೆ.


ಹೆಗ್ಗೇರಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಸತೀಶ್ ನಾಯ್ಡು ಈ ನರ್ಸರಿ ಶಾಲೆಯನ್ನು ಆರಂಭಿಸಿದ್ದು, 35ಕ್ಕೂ ಹೆಚ್ಚು ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಒಂದು ವಾರದ ಹಿಂದೆಯಷ್ಟೇ ಈ ಶಾಲೆಗೆ ಸೇರಿದ 4 ವರ್ಷದ ಬಾಲಕ ಪ್ರತಿನಿತ್ಯ ಶಾಲೆಗೆ ಬರುವಾಗ ಅಮ್ಮ ಬೇಕು ಅಮ್ಮ ಬೇಕು ಅಂತ ಹಠ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಶಾಲೆಯ ಆಯಾ ಬಾಲಕನ ಬೆನ್ನಿಗೆ ಬರೆ ಎಳೆದು ಗಾಯಗೊಳಿಸಿದ್ದಾಳೆ.


ಈ ಬಗ್ಗೆ ಮಗುವಿನ ತಾಯಿ ಕಾವೇರಿ ಶಿಕ್ಷಕ ಸತೀಶ್ ನಾಯ್ಡು ಅವರಲ್ಲಿ ದೂರು ನೀಡಿದರೆ ಈ ವಿಚಾರವನ್ನು  ಅಲ್ಲಗಳೆದ ಶಿಕ್ಷಕ  ಆ ರೀತಿ ನಡೆದುಕೊಂಡಿಲ್ಲ ಎಂದಿದ್ದಾರೆ. ಇದೀಗ ತಾಯಿ ಕಾವೇರಿ, ಶಿಕ್ಷಕ ಸತೀಶ ಹಾಗೂ ಆಯಾ ಮೇಲೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ