ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹದ ಬಗ್ಗೆ ಗೃಹ ಸಚಿವರು ಹೇಳಿದ್ದೇನು ?

ಗುರುವಾರ, 3 ಡಿಸೆಂಬರ್ 2020 (12:03 IST)
ಮಂಗಳೂರು : ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಉಗ್ರವಾದ ಮಾಡುವವರ ಮಾದರಿಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಇದೇ ಮಾದರಿಯಲ್ಲಿ ನಡೆಯುತ್ತೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಗಲಭೆ, ಉಗ್ರ ಕೃತ್ಯವೆಸಗುವ ಪ್ರದೇಶದಲ್ಲಿ ಇದೇ ಮಾದರಿಯಲ್ಲಿ ಗೋಡೆ ಬರಹಗಳನ್ನು ಬರೆಯಲಾಗುತ್ತದೆ. ಕಾಶ್ಮೀರ, ಇರಾಕ್, ಇರಾನ್ ನಲ್ಲಿ ಇದೇ ರೀತಿ ಬರೆಯುತ್ತಾರೆ. ಉಗ್ರರು ದುಷ್ಕೃತ್ಯವೆಸಗುವ ಮೊದಲು ಈ ರೀತಿ ಬರೆಯುತ್ತಾರೆ. ಇದೇ ರೀತಿಯ ಸಣ್ಣ ಪ್ರಯತ್ನ ಮಂಗಳೂರಿನಲ್ಲಿಯೂ ನಡೆದಿದೆ.

ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ. ಅತಿ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ