ಶಾಸಕ ಉಮೇಶ ಜಾಧವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದೇನು?

ಸೋಮವಾರ, 14 ಜನವರಿ 2019 (17:08 IST)
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬುದರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ಮತಕ್ಷೇತ್ರದ ಶಾಸಕ ಡಾ. ಉಮೇಶ ಜಾಧವ್ ನನ್ನ ಸ್ನೇಹಿತರು. ನಾನು ಅವರನ್ನು ಸಂಪರ್ಕ ಮಾಡಿದ್ದೇನೆ. ಅವರು ಕಾಂಗ್ರೆಸ್ ಪಕ್ಷದಲ್ಲಿ ಇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿರುವ ಅವರು, ಉಮೇಶ್ ಜಾಧವ ಅವರನ್ನು ಕರೆಯಿಸಿ ಮಾತನಾಡುತ್ತೇನೆ.  ನಮ್ಮದು ದೊಡ್ಡ ಪಕ್ಷವಾಗಿದ್ದು, ಅಸಮಾಧಾನ ಸರ್ವೇ ಸಾಮಾನ್ಯವಾಗಿರುತ್ತದೆ. ಮೈತ್ರಿ ಸರಕಾರ ಸುಭದ್ರವಾಗಿರುತ್ತದೆ ಎಂದು ಹೇಳಿದರು.

ಇನ್ನು ಸರಕಾರದ ಆಡಳಿತದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಮಾಡುತ್ತಿದೆ ಎಂಬ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಯಾವತ್ತೂ ಹಸ್ತಕ್ಷೇಪ ಮಾಡಿಲ್ಲ. ಸಂದರ್ಭ ಬಂದಾಗ ಕೆಲವು, ಸಲಹೆ ಸೂಚನೆಗಳನ್ನು ನೀಡಿದ್ದೇವೆ ಎಂದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ