ಆ ವಿದ್ಯಾರ್ಥಿನಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೇಳಿದ್ದೇನು?

ಗುರುವಾರ, 8 ಆಗಸ್ಟ್ 2019 (17:59 IST)
ಸಿಎಂ ಬಿ.ಎಸ್.ಯಡಿಯೂರಪ್ಪನವರು ವಿದ್ಯಾರ್ಥಿನಿಯೊಬ್ಬಳು ಕೇಳಿದ ಮಾತಿಗೆ ಒಂದು ಕ್ಷಣ ಆಶ್ಚರ್ಯ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿ ಆಸೆ ಈಡೇರಿಸೋದಾಗಿ ಭರವಸೆ ನೀಡಿದ್ರು.

ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಿದ್ಯಾರ್ಥಿನಿಯೊಬ್ಬಳು ಪಠ್ಯಪುಸ್ತಕ ಕೊಡಿಸುವಂತೆ ಕೇಳಿದ್ದಾಳೆ.

ಒಂದು ಕ್ಷಣ ಆಶ್ಚರ್ಯಚಕಿತಗೊಂಡ ಮುಖ್ಯಮಂತ್ರಿಗಳು, ನಾಳೆ ಸಂಜೆಯೊಳಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ರು.

ಹಿರಣ್ಯಕೇಶಿ ನದಿ ಪ್ರವಾಹದಿಂದ ನಿರಾಶ್ರಿತರಾಗಿರುವ ಸಂಕೇಶ್ವರ ಪಟ್ಟಣದ ರಾಮಚಿತ್ರ ಮಂದಿರದಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಿ.ಎ. ಮೊದಲ ವರ್ಷದ ವಿದ್ಯಾರ್ಥಿನಿ ಸೀಮಾ ಇಂಗಳಿ, ಪಠ್ಯಪುಸ್ತಕ ನೀರಿನಲ್ಲಿ ಹಾಳಾಗಿರುವುದರಿಂದ ಓದುವುದಕ್ಕೆ ತೊಂದರೆಯಾಗಿದೆ ಎಂದು ಅಹವಾಲು ಹೇಳಿಕೊಂಡಳು.

ಆಕೆಯ ಜತೆಗೆ ಮಾತನಾಡಿದ ಮುಖ್ಯಮಂತ್ರಿಗಳು, ಅಗತ್ಯ ಪುಸ್ತಕಗಳ ಪಟ್ಟಿಯನ್ನು ನೀಡುವಂತೆ ತಿಳಿಸಿದರು.
ಪಟ್ಟಿಯನ್ನು ನೀಡಿದ ತಕ್ಷಣ ಪಠ್ಯಪುಸ್ತಕಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ತಿಳಿಸಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ