ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಕೋಪಗೊಂಡ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ...?

ಭಾನುವಾರ, 4 ಫೆಬ್ರವರಿ 2018 (15:16 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಸ್ವಾಗತ ಕೋರಿದ್ದಕ್ಕೆ ಕೋಪಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ಉತ್ತರ ನೀಡಿದ್ದಾರೆ.


ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ‘ಪ್ರಧಾನಿಗಳಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದಗಳು. ಹೌದು, ಕರ್ನಾಟಕ ಹಲವು ವಿಚಾರಗಳಲ್ಲಿ ಮೊದಲನೇಯ ಸ್ಥಾನದಲ್ಲಿದೆ. ಅವುಗಳು ಹೀಗಿವೆ, ಭ್ರಷ್ಟಾಚಾರದಲ್ಲಿ ನಂಬರ್ ಒನ್, 3,500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರಿಗಳ ನಿಗೂಢ ಸಾವು, ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ, ಬೆಂಗಳೂರು ಅವನತಿ ಅಂತಾ ಬರೆದು, ಕೊನೆಗೆ #ಕರ್ನಾಟಕಟ್ರಸ್ಟ್ ( #KarnatakaTrustsModi)ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ