ರಕ್ಷಿತಾ ಮಂಡ್ಯದಲ್ಲಿ ಮಾಡಿಕೊಂಡಿದ್ದೇನು?

ಶುಕ್ರವಾರ, 23 ಆಗಸ್ಟ್ 2019 (20:08 IST)
ತನ್ನ ಗುರಿ ಕಡೆಗೆ ಗಮನ ಕೊಡಬೇಕಿದ್ದ ರಕ್ಷಿತಾ ಮಾಡಬಾರದ ಕೆಲಸ ಮಾಡಿಕೊಂಡಿದ್ದಾಳೆ.

ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಂಡ್ಯದ ಪಾಂಡವಪುರ ತಾಲೂಕಿನ ಕೆರೆ ತೊಣ್ಣೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿನಿಯಾಗಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದ ವಿದ್ಯಾರ್ಥಿನಿ ರಕ್ಷಿತಾ ಆತ್ಮಹತ್ಯೆಗೆ ಶರಣಾದವಳು.

ವಸತಿ ನಿಲಯದ ಕೊಠಡಿಯಲ್ಲಿ  ನೇಣಿಗೆ ಶರಣಾಗಿರೋ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ