ಚುನಾವಣೆ ಅಮಿತ್ ಶಾ ತಂತ್ರಗಾರಿಕೆ ಏನು?

ಶನಿವಾರ, 22 ಏಪ್ರಿಲ್ 2023 (10:30 IST)
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.
 
ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ