ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಪ್ರತಿಕ್ರಿಯೆ ಏನು?

ಗುರುವಾರ, 27 ಮೇ 2021 (17:14 IST)
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಕೆಲವು ಶಾಸಕರು ಈ ಬಗ್ಗೆ ದೆಹಲಿಗೆ ಹೋಗಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ದೆಹಲಿಗೆ ಹೋಗಿ ಬಂದರೆ ಅದಕ್ಕೆ ಅರ್ಥವಿಲ್ಲ. ದೆಹಲಿಗೆ ಹೋದವರಿಗೆ ಉತ್ತರ ಕೊಟ್ಟು ಕಳಿಸಿದ್ದಾರೆ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ್ ಟಾಂಗ್ ನೀಡಿದ್ದಾರೆ.

ಅಲ್ಲದೇ ಕೊರೊನಾ ಎದುರಿಸುವುದಷ್ಟೇ ನನ್ನ ಗುರಿ. ಕೊರೊನಾ ಗೆಲ್ಲುವ ಹೋರಾಟ ಬಿಟ್ಟು ಬೇರೆನೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ