ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಉತ್ತರ ಏನು ಗೊತ್ತಾ...?

ಭಾನುವಾರ, 11 ಮಾರ್ಚ್ 2018 (12:30 IST)
ಬೆಂಗಳೂರು : ನೂತನ ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಅವರು ಟೀಕೆ ಮಾಡಿದ್ದಾರೆ.

ಹಳದಿ, ಬಿಳಿ, ಕೆಂಪು ಮಧ್ಯದಲ್ಲಿಕರ್ನಾಟಕ ಸರ್ಕಾರದ ಲಾಂಛನವಿರುವ ತ್ರಿವರ್ಣ ನಾಡಧ್ವಜವನ್ನ ಪ್ರದರ್ಶಿಸಿದ  ಸಿಎಂ ಸಿದ್ದರಾಮಯ್ಯ ಅವರು  ಹಳದಿ ಸಮೃದ್ಧಿಯ ಸಂಕೇತ, ಬಿಳಿ ಶಾಂತಿಯ ಸಂಕೇತ, ಕೆಂಪು ಸ್ವಾಭಿಮಾನ ಹಾಗೂ ಧೈರ್ಯದ ಸಂಕೇತವಾಗಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು, ‘ಸಿದ್ದರಾಮಯ್ಯನವರೇ ನಮ್ಮ ಕನ್ನಡ ಬಾವುಟದ ಬಣ್ಣಗಳು ಅರಿಶಿಣ ಮತ್ತು ಕುಂಕುಮದ ಸಂಕೇತ. ನೀವು ಆ ಬಣ್ಣಗಳಿಗೆ ಬೇರೆ ವಿಕೃತ ಅರ್ಥ ಕಲ್ಪಿಸಬೇಡಿ. ಕೆಂಪು ಡೆಂಜರ್ ಎನ್ನುತ್ತಾರೆ. ನೀವು ಸಹ ಈ ರಾಜ್ಯಕ್ಕೆ ಡೆಂಜರ್ ಆಗಿದ್ದೀರಿ’ ಎಂದು ಟೀಕೆ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ