ಅಗ್ನಿ ಅವಘಡದ ಹಿನ್ನಲೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಕೊಟ್ಟ ಸೂಚನೆ ಏನು...?

ಸೋಮವಾರ, 8 ಜನವರಿ 2018 (11:50 IST)
ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಾರ್ ವೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, ಐವರು ಮರಣ ಹೊಂದಿದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿದ್ದರು.


ಬಾರ್ ಒಳಗೆ ಹೋಗಿ ಸ್ಥಳ ಪರಿಶೀಲಿಸಿದ ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಘಟನೆ ಬಗ್ಗೆ ಮಾಹಿತಿ ಪಡೆದ ಅವರು’ ಐವರಲ್ಲಿ ಮೂವರು ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಾತ್ ರೂಂ ಒಳಗೆ ಹೋಗಿ ಉಸಿರುಗಟ್ಟಿ ಸಾವನಪ್ಪಿದ್ದು, ಉಳಿದಿಬ್ಬರು ಕ್ಯಾಶ್ ಕೌಂಟರ್ ಲ್ಲಿ ಬೆಂಕಿಗೆ ಆಹುತಿಯಾಗಿರುವುದು ತಿಳಿದು ಬಂದಿದೆ. ಬೆಂಕಿ ಅವಘಡ ಹೇಗೆ ಸಂಭವಿಸಿತ್ತು ಎಂಬುದಕ್ಕೆ  ಸೂಕ್ತ ರೀತಿಯ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ