ಡಿಸಿಎಂ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಹೀಗಾ ಮಾಡೋದು?

ಶನಿವಾರ, 16 ನವೆಂಬರ್ 2019 (14:07 IST)
ಅನರ್ಹಗೊಂಡಿರೋ ಶಾಸಕ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ್ದಾರೆ ಅನರ್ಹ ಶಾಸಕ ಮಹೇಶ ಕುಮಠಳ್ಳಿ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ಪರ್ಧಿಸುತ್ತೇನೆ. ಡಿ‌ಸಿ‌ಎಮ್ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ ಎಂದು ಹೇಳಿದ್ರು.

ಪಕ್ಷ ಬದಲಾವಣೆ ಆಗಿರುವುದರಿಂದ ಹಳೆಯ ವಿಷಯಗಳನ್ನು ನಾನು ಮಾತನಾಡುವದಿಲ್ಲ. ನನ್ನ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದ್ರು. ಪಕ್ಷದ ವರಿಷ್ಠರ ಸಾರಥ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮಹೇಶ ಕುಮಠಳ್ಳಿ ಸ್ಪಷ್ಟಪಡಿಸಿದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ