ನುಡಿದಂತೆ ನಡೆದ ಸರಕಾರ ನಮ್ಮದು: ಸಿದ್ದರಾಮಯ್ಯ

ಶನಿವಾರ, 2 ಜುಲೈ 2016 (15:12 IST)
ನಾವು ಅಧಿಕಾರಕ್ಕೆ ಬರುವ ಮುಂಚೆ ನೀಡಿದ ವಾಗ್ದಾನದಂತೆ ನಡೆದುಕೊಂಡಿದ್ದೇವೆ. ನುಡಿದಂತೆ ನಡೆದ ಸರಕಾರ ನಮ್ಮದು ಎನ್ನುವ ಹೆಮ್ಮೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಎತ್ತಿದ ಕೈ. ಯಾವತ್ತೂ ಜನಪರ ಕಾರ್ಯಗಳಿಗೆ ಮುಂದಾಗುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಯಾವುದೇ ಸರಕಾರದಿಂದ ಮಳೆಗಾಲದಿಂದಾದ ಅನಾಹುತವನ್ನು ತುಂಬಲು ಸಾಧ್ಯವಿಲ್ಲ. ಮನಸ್ಸಿದ್ದರೆ ಮಾರ್ಗವಿರುತ್ತದೆ. ಅದರಂತೆ, ಪರ್ಯಾಯ ದಾರಿಯನ್ನು ನಾವು ಕಂಡುಕೊಳ್ಳಬೇಕಾಗಿದೆ ಎಂದರು.
 
ಅಧಿಕಾರಿಗಳು ಆಲಸ್ಯವನ್ನು ತೋರದೆ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರಮಿ,ಬೇಕು ಅಂದಾಗ ಮಾತ್ರ ಜನತೆ ನಮ್ಮನ್ನು ಹರಸುತ್ತಾರೆ. ಇಲ್ಲವಾದಲ್ಲಿ ನಮಗೆ ಶಾಪ ಹಾಕುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ಸಾರಿದ್ದಾರೆ.

  ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ