ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ : ಬಿಕೆ ಹರಿಪ್ರಸಾದ್

ಮಂಗಳವಾರ, 25 ಏಪ್ರಿಲ್ 2023 (07:48 IST)
ಕಾರವಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿಯ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
 
ಕಾರವಾರದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ ಮಸೀದಿ, ದೇವಸ್ಥಾನದಲ್ಲಿ ರಾಜಕೀಯ ಮಾಡುವವರು. ಜಾತಿ, ಧರ್ಮ ಹಾಗೂ ದ್ವೇಷದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಜನ ಸರಿಯಾದ ಉತ್ತರ ಕೊಡುತ್ತಾರೆ ಎಂದರು. 

ಬಿಜೆಪಿಯಲ್ಲಿ ಜಾತಿ ಮತ್ತು ಧರ್ಮ ರಂಗಪ್ರವೇಶ ಮಾಡಿದೆ. ಮಾಡಾಳ್ ವಿರೂಪಾಕ್ಷ ಭ್ರಷ್ಟಾಚಾರದಲ್ಲಿ ಬಿಜೆಪಿ ಮಾಡೆಲ್ ಆಗಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಎರಡೂವರೆ ಸಾವಿರ ಕೋಟಿ ಕೊಡುವವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ದಿವಾಳಿತನದ ಭಯವಿದೆ. ಕಾಂಗ್ರೆಸ್ನ  ಪ್ರಮುಖ ನಾಯಕರ ಪೋನ್ ಕದ್ದಾಲಿಕೆ ಈಗಲೂ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ