ಎಲ್ಲೇ ಇದ್ದರೂ ನಮ್ಮ ಶಾಸಕರನ್ನು ಕರೆತರುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ- ಡಿ.ಕೆ.ಶಿವಕುಮಾರ್

ಮಂಗಳವಾರ, 15 ಜನವರಿ 2019 (13:34 IST)
ಬೆಂಗಳೂರು : ಆನಂದ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನ ಕೆಲವು ಶಾಸಕರು ಅಪರೇಷನ್ ಕಮಲಕ್ಕೆ ಒಳಗಾಗಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಶಾಸಕರನ್ನು  ಎಲ್ಲೇ ಕೂಡಿಹಾಕಿರಲಿ ಕರೆತರ್ತೀವಿ. ಎಲ್ಲೇ ಇದ್ದರೂ ನಮ್ಮ ಶಾಸಕರನ್ನು ಕರೆತರುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ’ ಎಂದು ಹೇಳಿದ್ದಾರೆ.

 

‘ಶಾಸಕ ಆನಂದ್ ಸಿಂಗ್ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ಅವರು ಎಲ್ಲೂ ಓಡಿಹೋಗುವವರಲ್ಲ, ಹೋರಾಡುವವರು’ ಎಂದು ಸಚಿವ ಡಿ.ಕೆ.ಶಿವಕುಮಾರ್ ಶಾಸಕ ಆನಂದ್ ಸಿಂಗ್ ಬಗ್ಗೆ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ